2:06 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ

31/07/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು.
ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.‌
ಬಳಿಕ ಅವರು ಮಾತನಾಡಿ ದೃವನಾರಾಯಣ್ ಅವರು ಮಾಡಿಕೊಂಡು ಬರುತ್ತಿದ್ದ ಜನಪರ ಕೆಲಸಗಳನ್ನು ಅವರ ಪುತ್ರರಾದ ಶಾಸಕ ದರ್ಶನ್ ಧ್ರುವನಾರಾಯಣ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅವರ ಕನಸನ್ನು ಈಡೇರಿಸುವ ಸಲುವಾಗಿ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಇಂತಹ ಕೆಲಸ ನಿಜಕ್ಕೂ ಮೆಚ್ಚುವಂತಹದ್ದೆ ಎಂದು ಕಾರ್ಯಕ್ರಮ ಹಾಗೂ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಭಾಗದ ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಮ್ಮ ತಂದೆಯವರು ಶಾಸಕರಾಗಿ, ಸಂಸದರಾಗಿ ಈ ಭಾಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅದೇ ರೀತಿ ನಾನು ಕೂಡ ಅವರ ದಾರಿಯಲ್ಲಿಯೇ ಸಾಗಿ ಉತ್ತಮ ಕೆಲಸ ಮಾಡುತ್ತೇನೆ ನಿಮ್ಮ ಸಹಕಾರ ಬೆಂಬಲ ಯಾವಾಗಲೂ ಹೀಗೆ ಇರಲಿ ಎಂದರು.
ನೂರಕ್ಕೂ ಹೆಚ್ಚು ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಹರಸಿ ಬಂದ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದವು.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಸೇರಿದಂತೆ, ಸುಮಾರು 2,000 ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಕೆಲಸಕ್ಕಾಗಿ ನೊಂದಣಿ ಮಾಡಿಕೊಂಡಿದ್ದರು.
ಮೇಳದಲ್ಲಿ ಹಲವು ಕಂಪನಿಗಳಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳು ನೇರ ಉದ್ಯೋಗ ಪಡೆದುಕೊಂಡಿರುತ್ತಾರೆ.
ಇದರಲ್ಲಿ ವಿಶೇಷವಾಗಿ ನಾಲ್ಕು ಮಂದಿ ವಿಕಲಚೇತನರಿಗೂ ಸಹ ಉದ್ಯೋಗ ಸಿಕ್ಕಿ ಖಾತರಿ ಪತ್ರವನ್ನು ಸಹ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಧೀರನ್ ದ್ರುವ ನಾರಾಯಣ್, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯ್ ಕುಮಾರ್ ನಂಜನಗೂಡು ಉಸ್ತುವಾರಿ ಶ್ರೀಕಂಠ, ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು