8:46 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ

31/07/2024, 18:50

ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ. ಬಿ. ಶಶಿಧರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇತ್ತಿಚಿಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೇಮಕಾತಿಯ ಆದೇಶದ ಪ್ರತಿಯನ್ನು ವಿಸ್ತರಿಸಿದರು.

ಮುರಳಿ ಅವರು 30 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ಹಾಗು ಸೃಜನಶೀಲರಾಗಿ ತೊಡಗಿಸಿ ಕೊಂಡಿದ್ದಾರೆ. ಅದಲ್ಲದೆ ಅವರು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ, ಮಂಗಳೂರು ವಿಭಾಗದ ಅಧ್ಯಕ್ಷರಾಗಿಯು, ರೋಟರಿ ಕ್ಲಬ್ ದಕ್ಷಿಣ ವಿಭಾಗ ಇದರ ಸದಸ್ಯರಾಗಿಯು, ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿಯು ಮತ್ತು ಹಲವಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.
ಬಿಜೆಪಿ ಪ್ರಕೋಷ್ಠದ ರಾಜ್ಯ ಸಮಿತಿಯ ಸಂಯೋಜಕರಾದ ಎಸ್. ದತ್ತಾತ್ರಿ, ಸಹ ಸಂಯೋಜಕರಾದ ಫಣೀಷ್, ವಿಧಾನ ಪರಿಷತ್ ಸದಸ್ಯರಾದ ರವಿ ಕುಮಾರ, ಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ
ಡಾ. ಸಿ. ಬಿ. ಶಶಿಧರ, ಸಹ ಸಂಚಾಲಕರಾದ ಎಂ. ಜಿ. ಭಟ್ ಕುಮ್ಟ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು