12:48 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್ಲೆಡೆ ಶ್ಲಾಘನೆ

31/07/2024, 19:56

ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಒಕ್ಕೊರಲಿನಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಥಟ್ಟನೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾದ ಗಜೇಂದ್ರ ಕುಂದರ್ , ಮಹೇಶ್ ಪೂಜಾರಿ ಹಾಗೂ ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿಮೀ. ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಿನಿಂದ ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗೂ ಅವರ ಪ್ರಶಂಷೆ ಗೆ ಪಾತ್ರ ವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು