6:03 AM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ

31/07/2024, 20:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ.
ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.
ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.
ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ತೇಲಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು