6:10 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಿಂದ ಆಟಿಡೊಂಜಿ ಕೂಟ: ಮಕ್ಕಳಿಂದ ಆಟಿ ಕೊಡಂಗೆ ನೃತ್ಯ

01/08/2024, 01:03

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘ ಸಂಘದ ವತಿಯಿಂದ ನಮ್ಮ ತುಳುನಾಡಿನ ಆಟಿ ತಿಂಗಳಿನ (ಆಷಾಢ ಮಾಸದ) ವೈಶಿಷ್ಟ್ಯಮಯ ಸಂಸ್ಕೃತಿಯನ್ನು ನಮ್ಮ ಈಗಿನ ಹಾಗೂ ಮುಂದಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕೂಟ ಸಂಘದ ಮಹಿಳಾ ಸಮಿತಿಯ ಸಹಯೋಗದೊಂದಿಗೆ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸ್ವರೂಪ ಎನ್. ಶೆಟ್ಟಿ ಹಾಗೂ ಜ್ಯೋತಿ ಎಸ್ ಶೆಟ್ಟಿ ಅವರುಗಳು ಭಾಗವಹಿಸಿದ್ದರು. ನಮ್ಮ ತುಳುನಾಡಿನ ಆಚರಣೆಗಳು ಸಾಂಸ್ಕೃತಿಕ ಹಾಗೂ ನಂಬಿಕೆಗಳ ಆಧಾರವಾಗಿದ್ದು, ಆಟಿದ ಆ ಕಷ್ಟದ ದಿನಗಳ ಬಗ್ಗೆ ಹಾಗೂ ಆಟಿದ ಮಹತ್ವದ ಬಗ್ಗೆ ಅತಿಥಿಗಳು ಸಭೆಗೆ ಮಾಹಿತಿ ನೀಡಿದರು. ನಂತರ ಗ್ರಾಮದ ಮಕ್ಕಳಿಂದ ಆಟಿ ಕೊಡಂಗೆ ನೃತ್ಯ ಹಾಗೂ ಆಟಿಗೆ ಸಂಬಂಧಪಟ್ಟ ನೃತ್ಯ ಕಾರ್ಯಕ್ರಮಗಳು ಜರಗಿತು. ಪ್ರಾರಂಭದಲ್ಲಿ ಶಲ ವೀಣಾ ಕಿರಣ್ ಸ್ವಾಗತಿಸಿದರು, ವಿಜಯಶ್ರೀ ಅತಿಥಿಗಳ ಪರಿಚಯ ಮಾಡಿದರು. ಶಿಲ್ಪಾ ಆಟಿದ ಮದಿಪು ನೀಡಿದರು.
ಕವಿತಾ ಸಾಲಿಯಾನ್ ಅವರು ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್.ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಕೋಶಾಧಿಕಾರಿ ದಿನೇಶ್ ಅಂಚನ್ ಮತ್ತು ಮಹಿಳಾ ಸಮಿತಿಯ ಸಂಚಾಲಕಿ ಸುಮನ್ ಸುನೀಲ್, ಸಹ ಸಂಚಾಲಕಿ ಭಾನುಮತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ಸದಸ್ಯರು ಮಹಿಳಾ ಸಮಿತಿಯ ಸದಸ್ಯರು ಹಾಗೂ ಪರಿಸರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಸಂಘದ ಮಹಿಳಾ ಸಮಿತಿಯ ಸದಸ್ಯರು ತಯಾರಿಸಿದ ಆಟಿಗೆ ಸಂಬಂಧಪಟ್ಟಂತಹ ವಿವಿಧ ತಿಂಡಿ ತಿನಸುಗಳನ್ನು ಉಣ ಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು