7:20 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು