8:17 PM Monday1 - September 2025
ಬ್ರೇಕಿಂಗ್ ನ್ಯೂಸ್
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು