7:04 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ

02/08/2024, 19:23

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ಕಪಿಲಾ ನದಿಯ ಪ್ರವಾಹಕ್ಕೆ
ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನುವಾರುಗಳ ಜೊತೆ ಕಾಳಜಿ ಕೇಂದ್ರದ ಮೊರೆ ಹೋಗಬೇಕಾಗುತ್ತದೆ. ಇದರ ಶಾಶ್ವತ ಪರಿಹಾರಕ್ಕಾಗಿ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹಿಂಬದಿಯ ತಗ್ಗು ಪ್ರದೇಶಗಳಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ದರ್ಶನ್ ಅವರ ಜೊತೆಗೂಡಿ ವೀಕ್ಷಣೆ ಮಾಡಿದರು. ತೋಪಿನ ಬೀದಿ, ಕಪಿಲ ನದಿಯ ಸ್ನಾನಘಟ್ಟಕ್ಕೆ ತೆರಳಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿರಾಶ್ರಿತರಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂದೆ ಯಾವುದೇ ಹಾನಿಯಾಗದಂತೆ ಶಾಶ್ವತ ಪರಿಹಾರ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಎಲ್ಲಾ ರೀತಿಯ ಸೌಲಭ್ಯಗಳನ್ನು ತಾಲೂಕು ಮತ್ತು ಜಿಲ್ಲಾ ಆಡಳಿತದಿಂದ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಈ ಕುರಿತು ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ಮುಂದೆ ಪದೇ ಪದೇ ಈ ರೀತಿ ಆಗದೇ ಇರುವುದಕ್ಕೆ ಏನಾದರೂ ಶಾಶ್ವತ ಪರಿಹಾರಕ್ಕಾಗಿ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು