5:09 PM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ

02/08/2024, 19:23

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ಕಪಿಲಾ ನದಿಯ ಪ್ರವಾಹಕ್ಕೆ
ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನುವಾರುಗಳ ಜೊತೆ ಕಾಳಜಿ ಕೇಂದ್ರದ ಮೊರೆ ಹೋಗಬೇಕಾಗುತ್ತದೆ. ಇದರ ಶಾಶ್ವತ ಪರಿಹಾರಕ್ಕಾಗಿ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹಿಂಬದಿಯ ತಗ್ಗು ಪ್ರದೇಶಗಳಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ದರ್ಶನ್ ಅವರ ಜೊತೆಗೂಡಿ ವೀಕ್ಷಣೆ ಮಾಡಿದರು. ತೋಪಿನ ಬೀದಿ, ಕಪಿಲ ನದಿಯ ಸ್ನಾನಘಟ್ಟಕ್ಕೆ ತೆರಳಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿರಾಶ್ರಿತರಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂದೆ ಯಾವುದೇ ಹಾನಿಯಾಗದಂತೆ ಶಾಶ್ವತ ಪರಿಹಾರ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಎಲ್ಲಾ ರೀತಿಯ ಸೌಲಭ್ಯಗಳನ್ನು ತಾಲೂಕು ಮತ್ತು ಜಿಲ್ಲಾ ಆಡಳಿತದಿಂದ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಈ ಕುರಿತು ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ಮುಂದೆ ಪದೇ ಪದೇ ಈ ರೀತಿ ಆಗದೇ ಇರುವುದಕ್ಕೆ ಏನಾದರೂ ಶಾಶ್ವತ ಪರಿಹಾರಕ್ಕಾಗಿ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು