11:30 AM Saturday20 - December 2025
ಬ್ರೇಕಿಂಗ್ ನ್ಯೂಸ್
ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ…

ಇತ್ತೀಚಿನ ಸುದ್ದಿ

ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿ ಸಾಧ್ಯ: ವಿಜ್ಞಾನಿ ಡಾ ಆದರ್ಶ ಗೌಡ

02/08/2024, 20:22

ಸಂತೋಷ್ ಬೆಳಗಾವಿ

info.reporterkarnataka@gmail.com

ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ನಿರ್ವಹಿಸುತ್ತಿರುವರಿಗೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಣವನ್ನು ವಿನಾಕಾರಣ ಖರ್ಚು ಮಾಡದೆ ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತದೆ ಎಂದು ಮೀನುಗಾರಿಕಾ ವಿಜ್ಞಾನಿ ಡಾ ಆದರ್ಶ ಗೌಡ ಹೇಳಿದರು.
ಅವರು ಹಳ್ಳೂರ ಗ್ರಾಮದ ಶಿವಶಂಕರ ನಗರದ ಬಾಗೋಡಿ ತೋಟದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣ ಕೂಡಿಸುವ ಸರಿಯಾದ ಮಾರ್ಗ ಹುಡುಕಿ ಸ್ವಾರ್ಥ ಭಾವನೆ ಬಿಟ್ಟು ಇನ್ನೊಬ್ಬರಿಗೆ ಸಹಾಯ, ಸಹಕಾರ ಮಾಡುವ ಮನೋಭಾವ ಬೆಳೆಸಿಕೊಂಡು ಹೋದರೆ ಒಳ್ಳೆಯ ಅವಕಾಶ ಬರುತ್ತವೆ. ಬಡತನವೇ ಕಷ್ಟ ಅಂತ ಹೇಳಿ ಕುಳಿತರೆ ಪ್ರಯೋಜನವಿಲ್ಲ. ಭೂಮಿಯಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದೆಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಹಣ ಉಳಿತಾಯ ಮಾಡಲು ಸಾವಿರಾರು ದಾರಿ ಇದೆ. ಮಾಡುವ ಮನಸ್ಸು ಇದ್ದರೆ ಬಡತನ ಮೀರಿ ಯೋಚನೆ ಮಾಡಿದರೆ ಬಡತನ ನಿರ್ಮೂಲನೆ ಆಗುವುದು. ಹೈನುಗಾರಿಕೆ ಸಾಕಷ್ಟು ಜನ ಹೆಚ್ಚು ಲಾಭವನ್ನು ಪಡೆಯಬಹುದು. ಬೇರೆ ಬೇರೆ ರೀತಿಯ ಕೆಲಸ ಕಾರ್ಯ ಮಾಡಬಹುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು