3:22 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ

25/08/2021, 09:36

ಮಂಗಳೂರು(reporterkarnataka.com):

ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ.

ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್‌ಕುಮಾರ್ ಕಟೀಲ್‌ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಮಾಡಿದ್ದಾರೆ.

ಹೊಸ ಪ್ರಸ್ತಾವದ ಪ್ರಕಾರ ರೈಲು ಮಂಗಳೂರು ಜಂಕ್ಷನ್‌ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು–ವಿಜಯಪುರ ರೈಲಿನ ವೇಳಾಪಟ್ಟಿ ಪರಿಷ್ಕರಿಸಬೇಕು. ಈ ರೈಲು ಬೆಳಿಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್‌ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡುವಂತೆ ಮಾಡಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್‌ ಯಾರ್ಡ್‌ ಅಥವಾ ಉಳ್ಳಾಲ ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲು ಅವಕಾಶ ವಿದೆ. ಸಮಯಕ್ಕೆ ಸರಿಯಾಗಿ ಹೊರ ಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು