8:36 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ

25/08/2021, 09:36

ಮಂಗಳೂರು(reporterkarnataka.com):

ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ.

ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್‌ಕುಮಾರ್ ಕಟೀಲ್‌ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಮಾಡಿದ್ದಾರೆ.

ಹೊಸ ಪ್ರಸ್ತಾವದ ಪ್ರಕಾರ ರೈಲು ಮಂಗಳೂರು ಜಂಕ್ಷನ್‌ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು–ವಿಜಯಪುರ ರೈಲಿನ ವೇಳಾಪಟ್ಟಿ ಪರಿಷ್ಕರಿಸಬೇಕು. ಈ ರೈಲು ಬೆಳಿಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್‌ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡುವಂತೆ ಮಾಡಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್‌ ಯಾರ್ಡ್‌ ಅಥವಾ ಉಳ್ಳಾಲ ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲು ಅವಕಾಶ ವಿದೆ. ಸಮಯಕ್ಕೆ ಸರಿಯಾಗಿ ಹೊರ ಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು