2:37 PM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು