4:56 PM Thursday25 - December 2025
ಬ್ರೇಕಿಂಗ್ ನ್ಯೂಸ್
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು