1:26 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು