11:41 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು