2:31 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ಒಳ ಮೀಸಲಾತಿ ಶೀಘ್ರದಲ್ಲೇ ಜಾರಿಗೊಳಿಸಿ: ರಾಜ್ಯ ಸರಕಾರಕ್ಕೆ ದಲಿತ ಪರ ಒಕ್ಕೂಟ ಆಗ್ರಹ

03/08/2024, 16:12

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ರಾಜ್ಯ ಸರ್ಕಾರ ಆದಷ್ಟು ಬೇಗನೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ದಲಿತ ಪರ ಒಕ್ಕೂಟದ ಮುಖಂಡರು ಇಂದು ಒತ್ತಾಯಿಸಿದ್ದಾರೆ.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಹೋರಾಟವು ಕಳೆದ 30 ವರ್ಷಗಳಿಂದ ಹಲವಾರು ಹೋರಾಟ ಮಾಡಿದ ಫಲವಾಗಿ ಸರ್ವೋಚ್ಛ ನ್ಯಾಯಾಲಯವು ಇದೇ ತಿಂಗಳು ಒಂದನೇ ತಾರೀಕಿನಂದು ಒಳ ಮೀಸಲಾತಿಯ ಕುರಿತು ಮಹತ್ವದ ತೀರ್ಪನ್ನು ನೀಡಿ, ಪರಿಶಿಷ್ಟ ಜಾತಿಯಲ್ಲಿ ವರ್ಗೀಕರಣ ಅಗತ್ಯವಿದೆಯೆಂದು ತನ್ನ ಮಹತ್ತರವಾದ ತೀರ್ಪಿನಲ್ಲಿ ತಿಳಿಸಿದೆ, ಇದನ್ನು ಆಯಾ ರಾಜ್ಯಗಳು ಒಳ ಮೀಸಲಾತಿಗಳನ್ನು ಜಾರಿ ಮಾಡಬಹುದೆಂದು ಸಹ ತೀರ್ಪು ಉಲ್ಲೇಖಿಸಲಾಗಿದೆ, ಕಾರಣ
ರಾಜ್ಯ ಸರ್ಕಾರ ಆದಷ್ಟು ಬೇಗನೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ದಲಿತ ಪರ ಒಕ್ಕೂಟದ ಮುಖಂಡರು ಆಗ್ರಹಿಸಿದರು.
ನ್ಯಾಯಾಲಯದ ತೀರ್ಪಿನ್ನು ನೀಡಿರುವ ಸರ್ವೋಚ್ಛ ನ್ಯಾಯಾಲಯದ 7 ಜನ ನ್ಯಾಯಾಧೀಶರುಗಳಿಗೆ ಕರ್ನಾಟಕ ರಾಜ್ಯದ ಮಾದಿಗ ಜನಾಂಗದ ಸಂಘಟನೆಗಳು ದಲಿತ ಪರ ಹೋರಾಟಗಾರರು ಅಭಿನಂದನೆಯನ್ನು ಸಲ್ಲಿಸುತ್ತೇವೆ. ಇದರ ಅನುಗುಣವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು
ತ್ವರಿತವಾಗಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು  ಒತ್ತಾಯ ಮಾಡುತ್ತಿದ್ದೇವೆಂದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯ ಉಪ ಜಾತಿ ಮಾದಿಗ ಎಂದು ನಮೂದಿಸಲು ಕ್ರಮಕೈಗೊಳ್ಳಬೇಕು. ಸರ್ಕಾರದ ಎಲ್ಲಾ ಜಿಲ್ಲೆಯ ಜಿಲ್ಲಾಡಳಿತಗಳಿಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಲ್ಲಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದ ಮೇರೆಗೆ ತ್ವರಿತವಾಗಿ ಒಳಮೀಸಲಾತಿ ಜಾರಿ ಗೊಳಿಸಬೇಕು, ಉದಾಸೀನ ಮಾಡಿದಲ್ಲಿ ರಾಜ್ಯ ಸರ್ಕಾರದ ವಿರುದ್ದ ರಾಜ್ಯಾದ್ಯಾಂತ ಉಗ್ರವಾದ ಹೋರಾಟ ಹಮ್ಮಿ ಕೊಳ್ಳಲಾಗುವುದೆಂದು ಒಕ್ಕೂಟದ ಮುಖಂಡರುಗಳಾದ ಕೆ ಈಶ್ವರಪ್ಪ, ದುರುಗಪ್ಪ ತಳವಾರ, ಎ.ಕೆ. ಗಂಗಾಧರ್, ಸಂಗನಕಲ್ಲು ನೆಟ್ಟೆಪ್ಪ, ದಾನಪ್ಪ, ಹುಸೇನಪ್ಪ ಸೇರಿದಂತೆ ಹಲವಾರು ಜನರು ಪತ್ರಿಕಾಗೋಷ್ಠಿಯ ಮುಖಾಂತರ ತಿಳಿಸಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ಮೂರ್ತಿ, ಚಿಕ್ಕ ಗಾದಿಲಿಂಗಪ್ಪ, ರಮೇಶ್ ಕುಮಾರ್, ಪೃಥ್ವಿರಾಜ್, ವೀರಭದ್ರಪ್ಪ, ಕರ್ಚೇಡು ಶ್ರೀನಿವಾಸ್, ವೀರಸ್ವಾಮಿ, ಬಾಬು, ದುರುಗೇಶ್, ಗಾದಿಲಿಂಗ, ರುದ್ರಪ್ಪ, ಶಂಕರ್ ಸೇರಿದಂತೆ ಹಲವಾರು ಜನ ದಲಿತಪರ ಒಕ್ಕೂಟದ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು