11:27 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು