7:03 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು