6:09 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು