1:49 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು