1:21 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು