8:46 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ

25/08/2021, 09:43

ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು.

ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ಕನ್ನಡ ನಾಡಿನ ನೆಲ- ಜಲ-  ಭಾಷೆ- ಸಂಸ್ಕೃತಿ ಉಳಿಸಲು ಹೋರಾಡಿದ ವೈರಿಗಳಿಗೆ ಸಿಂಹಸ್ವಪ್ನ ನಾದ ಗಂಡುಗಲಿ ಕುಮಾರರಾಮ ಜಯಂತಿಯನ್ನು ಪೂಜ್ಯ ಆತ್ಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ತಲೆಖಾನ್ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಸ್ಕಿಹಾಳ ವಾಲ್ಮೀಕಿ ಮಠದ ಶ್ರೀ ಆತ್ಮಾನಂದ ಸ್ವಾಮೀಜಿಗಳು ಗ್ರಾಮದ ಸಮಾಧಿ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ,

 ವಾಲ್ಮೀಕಿ ಕುಲ ತಿಲಕ ಕುಮಾರರಾಮ ಪರನಾರಿ ಸಹೋದರತ್ವ ಭಾವನೆಯ ಆದರ್ಶಗಳನ್ನು ಸಂಸ್ಕೃತಿ, ಆಚಾರ ವಿಚಾರಗಳನ್ನು ಇಂದಿನ ಯುವ ಜನಾಂಗ ರೂಢಿಸಿಕೊಳ್ಳಬೇಕು. ಆತನ ಪರಾಕ್ರಮ, ಜನಪರ ಆಡಳಿತ ವೈಖರಿ, ಯುದ್ಧ ನೀತಿ, ಮಾನವೀಯ ಮೌಲ್ಯಗಳನ್ನು ಹೊಂದಿದ್ದನು. ಇಂತಹ ಮಹಾನ್ ವೀರನ ದೇಶ ಭಕ್ತಿ ನಾಡಿನ ರಕ್ಷಣೆಗಾಗಿ ಪ್ರಾಣ ಬಲಿದಾನ ಮಾಡಿದ್ದಾರೆ. ವಾಲ್ಮೀಕಿ ಸಮಾಜದ ಅದೆಷ್ಟೋ ರಾಜರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ತ್ಯಾಗ ಮಾಡಿದ ಸಮಾಜಕ್ಕೆ ಇಂದಿನ ಸರ್ಕಾರ ಸಮಾಜದ ಎಲ್ಲ ರೀತಿಯ ಸಹಕಾರ ಪಡೆದು ಮೀಸಲಾತಿಯಲ್ಲಿ ಮೀನಮೇಷ ಮಾಡುತ್ತಿರುವದು ವಿಷಾದನೀಯ ಸಂಗತಿಯಾಗಿದೆ. ಇನ್ನಾದರೂ ಈ ಸರ್ಕಾರ ಧೋರಣೆಯಿಂದ ಮುಕ್ತವಾಗುತ್ತಾ ಅಥವಾ ಮುಂದುವರಿಯುತ್ತಾ ಕಾದು ನೋಡಬೇಕಾಗಿದೆ ಎಂದು ಹೇಳಿದರು.

ನಂತರದಲ್ಲಿ ವಾಲ್ಮೀಕಿ ಸಮಾನ ಮನಸ್ಕರ ಸಂಘಟನೆ ಮುಖಂಡರಾದ ಅಶೋಕ ದಿದ್ದಿಗಿ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಬೊಲ್ಲ ಕುದುರೆ ಸವಾರಿ ಕುಮಾರರಾಮ ಜೀವನವ ಹಿನ್ನೆಲೆ, ರಾಜನೀತಿ ಬಗ್ಗೆ ಮಾತನಾಡಿದರು.

ಈ ಸಂದರ್ಭ ಶೇಖರಗೌಡ ಕಾಟಗಲ್ಲ, ಬಸವರಾಜ ತುಕ್ಕಲದಿನ್ನಿ, ಸೇತುರಾಮ ನಾಯಕ ಗೌಡೂರು,  ಕನಕಪ್ಪ ತಲೆಖಾನ, ರಮೇಶ ತಲೆಖಾನ,ಸೋಮಣ್ಣ ಲಿಂಗಸುಗೂರು, ಸೋಮಶೇಖರ ಸಿಂಧನೂರು, ಗ್ವಾಲಪ್ಪ ಉಸ್ಕಿಹಾಳ, ವೆಂಕಟೇಶ, ಅಮರೇಶ,ಜಕ್ಕಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು