12:07 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ

25/08/2021, 09:43

ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು.

ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ಕನ್ನಡ ನಾಡಿನ ನೆಲ- ಜಲ-  ಭಾಷೆ- ಸಂಸ್ಕೃತಿ ಉಳಿಸಲು ಹೋರಾಡಿದ ವೈರಿಗಳಿಗೆ ಸಿಂಹಸ್ವಪ್ನ ನಾದ ಗಂಡುಗಲಿ ಕುಮಾರರಾಮ ಜಯಂತಿಯನ್ನು ಪೂಜ್ಯ ಆತ್ಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ತಲೆಖಾನ್ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಸ್ಕಿಹಾಳ ವಾಲ್ಮೀಕಿ ಮಠದ ಶ್ರೀ ಆತ್ಮಾನಂದ ಸ್ವಾಮೀಜಿಗಳು ಗ್ರಾಮದ ಸಮಾಧಿ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ,

 ವಾಲ್ಮೀಕಿ ಕುಲ ತಿಲಕ ಕುಮಾರರಾಮ ಪರನಾರಿ ಸಹೋದರತ್ವ ಭಾವನೆಯ ಆದರ್ಶಗಳನ್ನು ಸಂಸ್ಕೃತಿ, ಆಚಾರ ವಿಚಾರಗಳನ್ನು ಇಂದಿನ ಯುವ ಜನಾಂಗ ರೂಢಿಸಿಕೊಳ್ಳಬೇಕು. ಆತನ ಪರಾಕ್ರಮ, ಜನಪರ ಆಡಳಿತ ವೈಖರಿ, ಯುದ್ಧ ನೀತಿ, ಮಾನವೀಯ ಮೌಲ್ಯಗಳನ್ನು ಹೊಂದಿದ್ದನು. ಇಂತಹ ಮಹಾನ್ ವೀರನ ದೇಶ ಭಕ್ತಿ ನಾಡಿನ ರಕ್ಷಣೆಗಾಗಿ ಪ್ರಾಣ ಬಲಿದಾನ ಮಾಡಿದ್ದಾರೆ. ವಾಲ್ಮೀಕಿ ಸಮಾಜದ ಅದೆಷ್ಟೋ ರಾಜರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ತ್ಯಾಗ ಮಾಡಿದ ಸಮಾಜಕ್ಕೆ ಇಂದಿನ ಸರ್ಕಾರ ಸಮಾಜದ ಎಲ್ಲ ರೀತಿಯ ಸಹಕಾರ ಪಡೆದು ಮೀಸಲಾತಿಯಲ್ಲಿ ಮೀನಮೇಷ ಮಾಡುತ್ತಿರುವದು ವಿಷಾದನೀಯ ಸಂಗತಿಯಾಗಿದೆ. ಇನ್ನಾದರೂ ಈ ಸರ್ಕಾರ ಧೋರಣೆಯಿಂದ ಮುಕ್ತವಾಗುತ್ತಾ ಅಥವಾ ಮುಂದುವರಿಯುತ್ತಾ ಕಾದು ನೋಡಬೇಕಾಗಿದೆ ಎಂದು ಹೇಳಿದರು.

ನಂತರದಲ್ಲಿ ವಾಲ್ಮೀಕಿ ಸಮಾನ ಮನಸ್ಕರ ಸಂಘಟನೆ ಮುಖಂಡರಾದ ಅಶೋಕ ದಿದ್ದಿಗಿ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಬೊಲ್ಲ ಕುದುರೆ ಸವಾರಿ ಕುಮಾರರಾಮ ಜೀವನವ ಹಿನ್ನೆಲೆ, ರಾಜನೀತಿ ಬಗ್ಗೆ ಮಾತನಾಡಿದರು.

ಈ ಸಂದರ್ಭ ಶೇಖರಗೌಡ ಕಾಟಗಲ್ಲ, ಬಸವರಾಜ ತುಕ್ಕಲದಿನ್ನಿ, ಸೇತುರಾಮ ನಾಯಕ ಗೌಡೂರು,  ಕನಕಪ್ಪ ತಲೆಖಾನ, ರಮೇಶ ತಲೆಖಾನ,ಸೋಮಣ್ಣ ಲಿಂಗಸುಗೂರು, ಸೋಮಶೇಖರ ಸಿಂಧನೂರು, ಗ್ವಾಲಪ್ಪ ಉಸ್ಕಿಹಾಳ, ವೆಂಕಟೇಶ, ಅಮರೇಶ,ಜಕ್ಕಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು