6:50 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಪಾದಯಾತ್ರೆ ಮುಗಿಯುವಷ್ಟರಲ್ಲಿ ಸರಕಾರ ಪತನ: ಕುಮಾರಸ್ವಾಮಿ | ಅದು ನಿಮ್ಮ ಭ್ರಮೆ; ಸರಕಾರವನ್ನು ಅಲುಗಾಡಿಸಲೂ ಸಾಧ್ಯವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

03/08/2024, 20:23

ಬೆಂಗಳೂರು(reporterkarnataka.com): ಬಿಜೆಪಿ- ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅದು ನಿಮ್ಮ ಭ್ರಮೆ. ನಮ್ಮ ಸರಕಾರವನ್ನು ಅಲುಗಾಡಿಸಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರಿಯಲಿ ನೋಡೋಣ ಎಂದು ಬಿಜೆಪಿ- ಜೆಡಿಎಸ್ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕುಮಾರಸ್ವಾಮಿ ಅವರು, ಸವಾಲು ಎಸೆದಿದ್ದಾರೆ.
ನಿಮ್ಮ ಪಾಪದ ಕೊಡ ತುಂಬಿದೆ. ನಮ್ಮ ಪಾದಯಾತ್ರೆ ಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್ ಗಳು ಬೀಳಬೇಕು. ಅದು ನಾಯಕನಿಂದಲೇ ಶುರುವಾಗಬೇಕು ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯನವರೇ,ಮುಡಾ ಸರಕಾರದ ಆಸ್ತಿ. ಬಡಾವಣೆ ಆಗಿರುವ ಆಸ್ತಿಯನ್ನು ನಿಮ್ಮ ಬಾವಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ? ಇದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆಯಲಾಗಿದೆಯೇ? ಸರ್ಕಾರದ ಜಮೀನನ್ನ ನಿಮ್ಮ ಬಾವಮೈದನ ಹೆಸರಿಗೆ ಹೇಗೆ ದಾಖಲಾತಿ ಮಾಡಿಕೊಟ್ಟರು. ಸಿದ್ದರಾಮಯ್ಯ ನನಗೆ ಇದ್ಯಾವುದು ಗೊತ್ತಿಲ್ಲ ಎನ್ನುತ್ತಾರೆ. ಅಲ್ಲಿ ನಡೆದ ಘಟನೆ ನಿಮ್ಮ ಗಮನಕ್ಕೆ ಬಾರದೇ ಆಗಿದೆಯಾ? ನಿಮ್ಮ ಪ್ರಭಾವ ಬೀರದೇ ಇಲ್ಲ ಎನ್ನುವುದಕ್ಕೆ ಸಾಧ್ಯವಿದೆಯಾ ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನೆಗಳನ್ನು ಸುರಿಮಳೆಗೈದಿದ್ದಾರೆ.
ಕುಮಾರಸ್ವಾಮಿ ಹೇಳಿಕೆಗೆ ರಾಮನಗರದಲ್ಲಿ ಡಿಸಿಎಂ ಶಿವಕುಮಾರ್ ಉತ್ತರ ನೀಡಿದ್ದಾರೆ. ಅದು ನಿಮ್ಮ ಭ್ರಮೆ. ತಿರುಕನ ಕನಸು. ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ರಾಮನಗರದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್, ಡಿಸೆಂಬರ್ ಗೆ ಸರ್ಕಾರ ಪಲ್ಟಿ ಮಾಡುತ್ತೇವೆ ಅಂತಾರೆ. ಅದೇನು ಹೊಡೆಯೋಕೆ ಮಡಕೆನಾ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ. ದೇಶವನ್ನ ಆಳುವ ಶಕ್ತಿ ಮತ್ತೆ ಉದ್ಭವ ಆಗುತ್ತೆ. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ. ಪಾದಯಾತ್ರೆ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ಪಾಂಡವಪುರ ಕಡೆ ಕಾಂಗ್ರೆಸ್ ಶಾಸಕರು ಇದ್ದಾರೆ. ನಿನ್ನೆ ಜೆಡಿಎಸ್ ಬಾವುಟವೇ ಇರಲಿಲ್ಲ. ನಾವು ನಿನ್ನೆ ಮಾತಾಡಿದ್ದಕ್ಕೆ ಜೆಡಿಎಸ್ ಬಾವುಟ ಹಾಕಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು