11:00 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಬಸ್ ಸಿಬ್ಬಂದಿಗಳಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

03/08/2024, 22:26

ಮಂಗಳೂರು(reporterkarnataka.com): ಬಸ್‌ನಲ್ಲಿ ಎದೆ ನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಅಭಿನಂದಿಸಲಾಯಿತು.
ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ ಅವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಆರ್. ಧನರಾಜ್ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ ಅಭಿನಂದನೆಗೆ ಅರ್ಹರು. ಇದರ ಜೊತೆಗೆ ತುಳು ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಅಧ್ಯಕ್ಷರು ತೊಡಗಿಸಿ ಕೊಳ್ಳಬೇಕಾಗಿದೆ ಎಂದರು. ನಿರ್ಮಾಪಕ ಕಿಶೋರ್ ಡಿ. ಶೆಟ್ಟಿ ಮಾತನಾಡಿ, ಇಂತಹ ಕಾರ್ಯಕ್ರಮ‌ ನಿರ್ಮಾಪಕರ ಸಂಘದಿಂದ ನಿರಂತರ ನಡೆಯಲಿ ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ನಿರ್ಮಾಪಕರಾದ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು