10:23 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಬಸ್ ಸಿಬ್ಬಂದಿಗಳಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

03/08/2024, 22:26

ಮಂಗಳೂರು(reporterkarnataka.com): ಬಸ್‌ನಲ್ಲಿ ಎದೆ ನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಅಭಿನಂದಿಸಲಾಯಿತು.
ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ ಅವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಆರ್. ಧನರಾಜ್ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ ಅಭಿನಂದನೆಗೆ ಅರ್ಹರು. ಇದರ ಜೊತೆಗೆ ತುಳು ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಅಧ್ಯಕ್ಷರು ತೊಡಗಿಸಿ ಕೊಳ್ಳಬೇಕಾಗಿದೆ ಎಂದರು. ನಿರ್ಮಾಪಕ ಕಿಶೋರ್ ಡಿ. ಶೆಟ್ಟಿ ಮಾತನಾಡಿ, ಇಂತಹ ಕಾರ್ಯಕ್ರಮ‌ ನಿರ್ಮಾಪಕರ ಸಂಘದಿಂದ ನಿರಂತರ ನಡೆಯಲಿ ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ನಿರ್ಮಾಪಕರಾದ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು