3:33 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಬಸ್ ಸಿಬ್ಬಂದಿಗಳಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

03/08/2024, 22:26

ಮಂಗಳೂರು(reporterkarnataka.com): ಬಸ್‌ನಲ್ಲಿ ಎದೆ ನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಅಭಿನಂದಿಸಲಾಯಿತು.
ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ ಅವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಆರ್. ಧನರಾಜ್ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ ಅಭಿನಂದನೆಗೆ ಅರ್ಹರು. ಇದರ ಜೊತೆಗೆ ತುಳು ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಅಧ್ಯಕ್ಷರು ತೊಡಗಿಸಿ ಕೊಳ್ಳಬೇಕಾಗಿದೆ ಎಂದರು. ನಿರ್ಮಾಪಕ ಕಿಶೋರ್ ಡಿ. ಶೆಟ್ಟಿ ಮಾತನಾಡಿ, ಇಂತಹ ಕಾರ್ಯಕ್ರಮ‌ ನಿರ್ಮಾಪಕರ ಸಂಘದಿಂದ ನಿರಂತರ ನಡೆಯಲಿ ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ನಿರ್ಮಾಪಕರಾದ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು