11:09 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ನಂಜನಗೂಡು: ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ: ಆಸ್ಪತ್ರೆಗೆ ದಾಖಲು

04/08/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸವಣ್ಣ ಎಂಬಾತ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಿಗ್ಗೆಯಿಂದ ಸರಿ ಸುಮಾರು ನಾಲ್ಕು ಗಂಟೆಯವರೆಗೂ ನಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸಿ ಮನೆಗೆ ತೆರಳಲು ಮುಂದಾದಾಗ ಮೇವು ಕಟಾವು ಮಾಡಲು ಜಮೀನಿನ ಒಳಭಾಗಕ್ಕೆ ತೆರಳಿದಾಗ ಏಕಾಏಕಿ ಚಿರತೆ ನನ್ನ ಮೇಲೆ ಎಗರಿತು. ನಾನು ಗಾಬರಿಯಾಗಿ ಜೋರಾಗಿ ಕೂಗಿದ ಬಳಿಕ ನನ್ನನ್ನು ಬಿಟ್ಟಿತು ಎಂದು ಗಾಯಗೊಂಡು ಆಸ್ಪತ್ರೆ ಸೇರಿರುವ ರೈತ ಅಳಲು ತೋಡಿಕೊಂಡರು. ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮತ್ತು ಸಂಘಟಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು