10:05 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸ್ಟೀಲ್ ಸಿಟಿ ಮ್ಯಾರಥಾನ್: ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗಿ

04/08/2024, 19:05

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ನಗರದಲ್ಲಿನ ಬಳ್ಳಾರಿ ಸೈರ್ಲೆಸ್ಟ್ ರನರ್ಸ್ ಫೌಂಡೇಶನ್ ಮತ್ತು ಜೆ ಎಸ್ ಡಬ್ಲು ಸಹಯೋಗದೊಂದಿಗೆ ಅಗಸ್ಟ್ 4ರಂದು ಸ್ಟೀಲ್ ಸಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು ಇದರಲ್ಲಿ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲೆಯ ವಿದ್ಯಾರ್ಥಿಗಳು ಮ್ಯಾರಥಾನ್ ನಲ್ಲಿ ತೋರಿದ ಉತ್ಸಾಹ ಮತ್ತು ಕ್ರೀಡಾಸಕ್ತಿಯಿಂದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಓಟದಿಂದ ಮಕ್ಕಳಲ್ಲಿ ದೈಹಿಕ ಸುಸ್ಥಿತಿಯನ್ನು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶ ಹೊಂದಿತ್ತು.
ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯವನ್ನು ತೋರಿಸುದಷ್ಟೇ ಅಲ್ಲದೇ, ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸುವ ಮಹತ್ವದ ಅನುಭವವನ್ನು ಹೊಂದಿದರು. ಸಾಧನೆ ಮತ್ತು ಆತ್ಮ ವಿಶ್ವಾಸದ ಭಾವನೆಯನ್ನು ಶಾಲೆಯ ಮಕ್ಕಳು ಹೊಂದಿದ್ದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳು ಭಾಗವಹಿಸುವಿಕೆಯನ್ನು ಹೆಮ್ಮೆ ಪಟ್ಟರು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿ ಬೌದ್ಧಿಕ ಉನ್ನತಿಗೆ ಸಮಾನ ಪ್ರಾಮುಖ್ಯತೆಯನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಪ್ರತಿಕ್ರಿಯೆಯು ಸಂತೃಪ್ತವಾಗಿದೆ ಎಂದು ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ. ಎನ್. ಸುರೇಶ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಓಟವು ಕ್ರೀಡೆಗಳಲ್ಲಿ ಅತ್ಯುತ್ತಮವಾದದ್ದು, ಓಟದ ಮುಖಾಂತರ ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಮನೋಬಲವನ್ನು ಹೆಚ್ಚಿಸುತ್ತದೆ. ನಮ್ಮ ಶಾಲೆಯಲ್ಲಿ ಕ್ರೀಡೆಗಳಿಗೆ ಹೆಚ್ಚು ಮಹತ್ವವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಹಾಗೂ ಕ್ರೀಡಾಪಟುಗಳ ಬಗ್ಗೆ ಸವಿವರವಾಗಿ ಶಾಲೆಯ ಮುಖ್ಯಗುರುಗಳಾದ ವಿರೇಶ್ ರವರು ತಮ್ಮ ಮಾತುಗಳಲ್ಲಿ ತಿಳಿಸಿಕೊಟ್ಟರು.
ಈ ಮ್ಯಾರಥಾನ್ ನಲ್ಲಿ ಶಾಲೆಯ ವಿದ್ಯಾರ್ಥಿಗಳು
5 ಕಿಮೀ ಓಟಕ್ಕೆ ನೊಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳು ದೈಹಿಕ ಆರೋಗ್ಯಕ್ಕೆ ವಿದ್ಯಾಭ್ಯಾಸದಷ್ಟೇ ಪ್ರಾಮುಖ್ಯತೆಯನ್ನು ನೀಡುವ ಸಮತೋಲನಾತ್ಮಕ ಶಿಕ್ಷಣದತ್ತ ಶ್ರೀ ವಾಸವಿ ವಿದ್ಯಾಲಯವು 42 ವರ್ಷಗಳಿಂದ ಬದ್ದತೆಯನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು