11:45 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ

04/08/2024, 19:19

ಶಿವು ರಾಠೋಡ ರಾಯಚೂರು

info.reporterkarnataka@gmail.com

ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು – ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ – ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.
ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ. ಉಪಾಧ್ಯಕ್ಷರು ಈರಣ್ಣ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್,ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು