7:46 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತುಳು ಅಕಾಡೆಮಿಯಲ್ಲಿ ಆಟಿಯ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ

05/08/2024, 00:30

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಭಾನುವಾರ ನಗರದ ಉರ್ವಸ್ಟೋರ್ ಬಳಿಯ ತುಳು ಭವನದಲ್ಲಿ ನಡೆಯಿತು.



ಆಟಿಯ ಗಮ್ಮತ್ತ್ ,ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.


ವಿದ್ಯಾರ್ಥಿಗಳಿಗೆ ಆಟಿಯ ಹಿನ್ನೆಲೆಯಲ್ಲಿ ಚಿತ್ರ ರಚನಾ ಸ್ಪರ್ಧೆ ಹಾಗೂ ವಿಚಾರ ಮಂಥನ ಕೂಟ ನಡೆಯಿತು.
ಹಿರಿಯರು ಹೇಳಿದ ಆಟಿಯ ಮಾಹಿತಿಯ ಬಗ್ಗೆ ಹಾಗೂ ಆಟಿ ತಿಂಗಳಲ್ಲಿ ತುಳುನಾಡಿನ ಪರಿಸರದಲ್ಲಿ ಕಾಣಸಿಗುವ ಪ್ರಕೃತಿ ವೈಶಿಷ್ಟ್ಯಗಳ ಬಗ್ಗೆ ವಿದ್ಯಾರ್ಥಿಗಳು ಚಿತ್ರ ರಚನೆ ಮಾಡಿದರು.
ವಿಚಾರ ಮಂಥನ ಕಾರ್ಯಕ್ರಮವನ್ನು ಜಿಲ್ಲಾ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಷಾ ಉದ್ಘಾಟಿಸಿ ಮಾತನಾಡಿ, ತುಳು ಅಕಾಡೆಮಿಯು ‘ಆಟಿ ಗೇನ’ದ ವಿಶಿಷ್ಟ ಕಾರ್ಯಕ್ರಮದ ಮೂಲಕ ಹಿಂದಿನ ಕಾಲದ ಆಟಿ ತಿಂಗಳನ್ನು ಪರಿಚಯಿಸುವ ಕಾರ್ಯ ಹಮ್ಮಿಕೊಂಡಿರುವುದು ಸ್ತುತ್ಯಾರ್ಹವಾದುದು ಎಂದು ಅಭಿಪ್ರಾಯಪಟ್ಟರು .
ಕಾರ್ಯಕ್ರಮದಲ್ಲಿ ಹಿರಿಯ ತುಳು ಸಂಶೋಧಕಿ ಡಾ.ಇಂದಿರಾ ಹೆಗ್ಡೆ ಅವರು ಉಪನ್ಯಾಸ ನೀಡಿ , ಹಿಂದಿನ ಕಾಲದಲ್ಲಿ ಆಟಿ ಅಂದರೆ ಅನಿಷ್ಟ ತಿಂಗಳು ಎಂಬ ಭಯ ಇತ್ತು . ವೃತ್ತಿ ಬದುಕಿಗೆ ಭಾರೀ ಸಂಕಷ್ಟವಿದ್ದ ಆ ಕಾಲದ ಜನರಿಗೆ ಅಂದಿನ ಆಟಿ ತಿಂಗಳು ಅನಿಷ್ಠವಾಗಿ ಕಂಡಿರಬಹುದು. ಇವತ್ತು ಆಟಿ ಕಾರ್ಯಕ್ರಗಳ ಮೂಲಕ ಗೌಜಿ , ಆಡಂಬರದ ಕಾರ್ಯಗಳಿಗೆ ಒತ್ತು ನೀಡುತ್ತಿದ್ದೇವೆ , ಇದು ಬಾರೀ ಜಿಜ್ಞಾಸೆಯ ವಿಚಾರ ಎಂದು ಹೇಳಿದರು. ಯಾವುದೇ ಹಬ್ಬ , ಆರಾಧನೆಗಳು ನಡೆಯದಿದ್ದ ಆಟಿ ತಿಂಗಳಲ್ಲಿ ಈಚೆಗೆ ನೂರು ವರ್ಷಗಳಿಂದ ವೈದಿಕ ಪ್ರಭಾವದ ಕಾರಣವಾಗಿ ಆಟಿ ತಿಂಗಳಲ್ಲಿ ನಾಗರ ಪಂಚಮಿ ಆಚರಣೆಗೆ ಬಂತು, ಹಿಂದಿನ ಕಾಲದಲ್ಲಿ ಭೂಮಿ ತಂಪಾಗಿದ್ದ ಮಳೆಗಾಲದಲ್ಲಿ ನಾಗನಿಗೆ ತನು ಅರ್ಪಿಸುವ ಸಂಪ್ರದಾಯ ಇರಲಿಲ್ಲ, ಬದಲಿಗೆ ಆಟಿ ಅಮಾವಾಸ್ಯೆ ದಿನ ನಾಗ ಬನದಲ್ಲಿ ಗಿಡಗಂಟಿಗಳನ್ನು ಕತ್ತರಿಸಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು ಎಂಬುದನ್ನು ಇಂದಿರಾ ಹೆಗ್ಡೆ ಅವರು ನೆನಪಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ , ಅಕಾಡೆಮಿಯು ತುಳುನಾಡಿನ ವಿವಿಧ ಮೂಲ ಸಮುದಾಯಗಳ ಸಾಂಸ್ಕೃತಿಕ ಆಯಾಮ, ಆಚಾರ , ವಿಚಾರ, ಸಂಪ್ರದಾಯಗಳ ಬಗ್ಗೆ ದಾಖಲೀಕರಣ ಮಾಡುವ ಉದ್ದೇಶವಿರಿಸಿಕೊಂಡಿದೆ, ಆಟಿ ತಿಂಗಳಲ್ಲಿ ನಡೆಯುವ ಭೂತಾರಾಧನೆಯ ಬಗ್ಗೆ ಕೂಡ ಅಧ್ಯಯನ, ದಾಖಲೀಕರಣ ಮಾಡಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಕೃಷಿ ಕಸುಬಿನ ಮಹಿಳೆಯರಾದ ಲೀಲಾ, ಸುರ್ಯೆದಿ, ಮೋಹಿನಿ, ಇಂದಿರಾ ಅವರನ್ನು ಸನ್ಮಾನಿಸಲಾಯಿತು.
ತುಳು ಅಕಾಡೆಮಿ ಸದಸ್ಯ ರೋಹಿತ್ ಉಳ್ಳಾಲ್ , ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ರವಿ ಕುದ್ಮುಲ್ ಗಾರ್ಡನ್ ಶುಭಕೋರಿ ಮಾತನಾಡಿದರು.




ವೇದಿಕೆಯಲ್ಲಿ ಶ್ವಾಸಕೋಶ ತಜ್ಞೆ ಡಾ.ಅಲ್ಕಾ ಸಿ.ಭಟ್ , ಲತಾ ಎಸ್.ಬಿ.‌, ಚಂದ್ರಪ್ರಭಾ ಶೇಖರ್ , ಅನಿತಾ ದಯಾಕರ್ , ರತ್ನಾವತಿ ರಂಜನ್ , ಚೈತ್ರಾ ಮುಲ್ಲಕಾಡ್ ಉಪಸ್ಥಿತರಿದ್ದರು.
ಕಲಾವಿದರಾದ ಬಿ.ಪಿ.ಮೋಹನ್ ಕುಮಾರ್ , ನೇಮಿರಾಜ್ ಶೆಟ್ಟಿ, ಹರೀಶ್ ಕೊಡಿಯಾಲಬೈಲ್ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು.
ಸುಪ್ರಿತಾ ಪ್ರಸಾದ್ ಸ್ವಾಗತಿಸಿದರು.
ಸುಮಾ ಯಾದವ್ ಕಾರ್ಯಕ್ರಮ ನಿರ್ವಹಿಸಿದರು. ಶ್ರದ್ಧಾ ಎಸ್. ವಂದಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು