4:28 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಬಳ್ಳಾರಿ: ವಿರೋಧ ಪಕ್ಷಗಳ ಷಡ್ಯಂತ್ರ ವಿರುದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೃಹತ್ ಜಾಥಾ

05/08/2024, 20:11

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ವಿರೋಧ ಪಕ್ಷಗಳ ಷಡ್ಯಂತ್ರ ಮತ್ತು ರಾಜ್ಯಪಾಲರ ಅನುಮಾಸ್ಪದ ನಡೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಇಲ್ಲಿಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಗಳ ವತಿಯಿಂದ ಮುಖ್ಯಮಂತ್ರಿ
ಪರವಾಗಿ ಬೆಂಬಲಿಸಿ ಬೃಹತ್ ಜಾಥಾ ನಡೆಯಿತು.
ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ, ಬೃಹತ್ ಜಾಥಾದಲ್ಲಿ ನಗರ ಶಾಸಕ ಭರತ್ ರೆಡ್ಡಿ, ಸಂಸದ ಈ ತುಕಾರಾಂ, ಕಂಪ್ಲಿ ಶಾಸರ ಗಣೇಶ್ ಮುಂತಾದವರು ಮಾತನಾಡಿ ರಾಜ್ಯಪಾಲರ ಕ್ರಮವನ್ನು ಖಂಡಿಸಿದರು.
ನಂತರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇಮಾಮ್ ಗೋಡೆಕರ್ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಅವರಿಗೆ ಬರೆದ ಮನವಿ ಪತ್ರವನ್ನು ಓದಿ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾಯಿತು.
ಜಾಥಾದಲ್ಲಿ  ಡಿಎಸ್ಎಸ್ ರಾಜ್ಯ ಸಂಚಾಲಕ ಎ. ಮಾನಯ್ಯ, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ.ಗಾದಿ ಲಿಂಗನಗೌಡ, ಹುಮಾಯೂನ್ ಖಾನ್, ಮಾನಯ್ಯ, ಮುಂಡ್ರಿಗಿ ನಾಗರಾಜ್, ಸಂಗನಕಲ್ಲು ವಿಜಯಕುಮಾರ್,
ಚಿದಾನಂದಪ್ಪ ಯಾದವ್, ನರಸಪ್ಪ, ಶಿವಶಂಕರ್, ರಫೀಕ್, ಬೆಣಕಲ್ ಬಸವರಾಜಗೌಡ, ಪಿ.ಜಗನ್ನಾಥ, ಗಾದೆಪ್ಪ, ಕುಡಿತಿನಿ ರಾಮಾಂಜನೇಯ, ಯರ್ರಿಸ್ವಾಮಿ,ಧನಂಜಯ.
ಹಮಲ್,ಭಾಗವಹಿಸಿದ್ದರು.ಕೆಪಿಸಿಸಿ, ಡಿಸಿಸಿ, ಬಿಸಿಸಿ ಪದಾಧಿಕಾರಿಗಳು,
ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಸದಸ್ಯರು,ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನಾ ಮೆರವಣಿಗೆಯನ್ನು ಬೆಂಬಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು