4:21 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

06/08/2024, 19:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,
ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು
ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು