4:28 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜೋಕಟ್ಟೆ: ಬಾಡಿಗೆ ಮನೆಯಲ್ಲಿ ಕೊರಳಿಗೆ ಬಟ್ಟೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ; ಕೊಲೆ ಶಂಕೆ

06/08/2024, 19:17

ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ ತಮ್ಮನ ಮಗಳಾದ 13ರ ಹರೆಯದ ಬಾಲಕಿಯು ಕೈ ನೋವಿನ ಚಿಕಿತ್ಸೆಗಾಗಿ ಆಗಮಿಸಿ ವಾಸ್ತವ್ಯ ಹೊಂದಿದ್ದಳು. ಇಂದು ಬೆಳಗ್ಗೆ ಹನುಮಂತನ ಮನೆಯವರೆಲ್ಲ ಕೆಲಸಕ್ಕೆ ಹೋದಾಗ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ತಿಳಿಸಿದ್ದರು. ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ಇದ್ದ ಬಾಡಿಗೆ ಮನೆಗೆ ಹೋದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿರುವ ಹಾಗೆ ಕಾಣಿಸುತ್ತಿದೆ ಎಂದು ಬಾಲಕಿಯ ತಾಯಿಗೆ ತಿಳಿಸಿದರು. ತಕ್ಷಣ ಮೃತ ಬಾಲಕಿಯ ತಾಯಿ ಹನುಮಂತ ಅವರಿಗೆ ಫೋನ್ ಮಾಡಿ ಬಾಡಿಗೆ ಮನೆಗೆ ಹೋಗುವಂತೆ ಹೇಳಿದರು. ಹನುಮಂತ ಅವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ದೂರು ನೀಡಿದರು. ಪಣಂಬೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್, ಡಿಸಿಪಿ ದಿನೇಶ್ ಕುಮಾರ್ ಮುಂತಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು