4:27 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

07/08/2024, 00:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು