2:14 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

07/08/2024, 00:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು