3:26 AM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು