7:03 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು