2:28 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು