5:08 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು