1:41 AM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಸ್ವಾಮಿ ನಂಜುಂಡೇಶ್ವರ… ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ಕೊಡು: ಪರಮ ಭಕ್ತರಿಂದ ಪತ್ರಗಳ ಸುರಿಮಳೆ…!

07/08/2024, 20:04

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ದಕ್ಷಿಣಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ.
ನಿನ್ನ ನೋಡಲು ಬರುವ ಲಕ್ಷಾಂತರ ಭಕ್ತರಿಗೆ ದೇವಾಲಯದ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ನೀಡುವಂತೆ ಪತ್ರ ಬರೆದಿದ್ದಾರೆ. ಎಣಿಕೆ ವೇಳೆ ಅಧಿಕಾರಿಗಳಿಗೆ ಪತ್ರ ದೊರೆತಿದೆ.
ಒಂದು ಪತ್ರದಲ್ಲಿ ನನ್ನ ತಾತ, ನನ್ನ ತಂದೆ ನಾನು ಹಾಗೂ ನನ್ನ ಮಗ ಎಲ್ಲರೂ ನಿನ್ನ ಭಕ್ತರೇ. ಬಹಳ ದೂರದಿಂದ ನಿನ್ನ ಕಾಣಲು ಪ್ರತಿ ಹುಣ್ಣಿಮೆ ಹಾಗೂ ವಿಶೇಷ ದಿನಗಳಲ್ಲಿ ಬರುತ್ತೇವೆ.
ತಂದೆ ನಿನ್ನ ದರುಶನದಿಂದ ನಮ್ಮ ಕಷ್ಟಗಳೆಲ್ಲಾ ದೂರವಾಗಿದೆ ಒಡೆಯ. ಆದರೆ, ನಿನ್ನ ನೋಡಲು ಬರುವಾಗ ತುಂಬಾ ಕಷ್ಟವಾಗುವುದು. ರಾತ್ರಿ ಮಲಗುವುದಕ್ಕೆ ಚಿಕ್ಕ ಜಾಗವೂ ಇರುವುದಿಲ್ಲ. ಬೆಳಿಗ್ಗೆ ಸ್ನಾನಕ್ಕೆ ಕಪಿಲಾ ನದಿಗೆ ಹೋದರೆ ಎಲ್ಲಿ ನೋಡಿದರೂ ಕಸ ಕಸ ಕಸ. ಹೆಂಗೋ ಸ್ನಾನ ಮಾಡಿದರೆ ನನ್ನ ಮಡದಿಗೆ, ತಾಯಿಗೆ ಬಟ್ಟೆ ಬದಲಿಸಲೂ ಜಾಗವಿಲ್ಲ. ಉರುಳು ಸೇವೆ ಮಾಡಲು ವ್ಯವಸ್ಥೆ ಇಲ್ಲ. ಇನ್ನೂ ಅನೇಕ ತೊಂದರೆಗಳು ಈ ಬಗ್ಗೆ ಅಧಿಕಾರಿಗಳಿಗೆ, ರಾಜಕಾರಿಣಿಗಳಿಗೆ ಪತ್ರ ಬರೆದು ಸಾಕಾಗಿದೆ.
ಕೊನೆಯದಾಗಿ ನಿನಗೆ ನನ್ನ ಪತ್ರ ಬರೆದಿದ್ದೇನೆ. ನಿನ್ನ ಸನ್ನಿಧಿಗೆ ಬರುವ ನಮ್ಮಂತಹ ಲಕ್ಷಾಂತರ ಭಕ್ತರಿಗೆ ಈ ಕೆಟ್ಟ ವ್ಯವಸ್ಥೆಯಿಂದ ಪರಿಹಾರ ಕೊಡು ತಂದೆ.
ಇಂತಿ ನಿನ್ನ ಪರಮ‌ಭಕ್ತ ಎಂದು ಬರೆದಿದ್ದಾರೆ.
ಎರಡನೇ ಪತ್ರದಲ್ಲಿ, ಅಸಂಖ್ಯಾತ ಭಕ್ತರನ್ನು ಹೊಂದಿರುವ ನಿನಗೆ ಪ್ರತಿತಿಂಗಳು ಕೋಟ್ಯಂತರ ಹಣ ನಿನ್ನ ಮಡಿಲಿಗೆ ಹಾಕುತ್ತಿದ್ದಾರೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿಯಿಂದ ಮೂಲಭೂತ ಸೌಕರ್ಯ ದೊರೆಯುತ್ತಿಲ್ಲ ಎಂಬ ಯಾತನೆ ಹಾಗೂ ತಳಮಳ ತರುವ ವಿಷಯವಾಗಿದೆ. ಭಕ್ತರು ತಂಗಲು ವ್ಯವಸ್ಥೆ ಇಲ್ಲ ಎಂಬ ಕೊರಗು ಇದೆ. ಇನ್ನು ದೇವಾಲಯದ ಸಿಬ್ಬಂದಿಗಳು ಭಕ್ತರನ್ನ ನಿಕೃಷ್ಟವಾಗಿ ಕಾಣುತ್ತಿದ್ದಾರೆ ಅವರಿಗೆ ಒಳ್ಳೆಯ ಬುದ್ದಿ ಕೊಡು. ಭಕ್ತರಿಂದ ಸಂಗ್ರಹವಾಗುವ ದೇಣಿಗೆ ಹಣದಲ್ಲಿ ವಸತಿ ಸಂಕೀರ್ಣ ನಿರ್ಮಿಸುವುದಾಗಿ ಹೇಳಿದ್ರು. ಇದೀಗ ವಸತಿ ಸಂಕೀರ್ಣಕ್ಕೆ ಜಾಗವಿಲ್ಲ ಎಂದು ಹೇಳುತ್ತಿರುವ ಆಡಳಿತ ಮಂಡಳಿಗೆ ವಸತಿ ಸಂಕೀರ್ಣ ನಿರ್ಮಿಸಲು ಪ್ರೇರಣೆ ನೀಡು ಹಾಗೂ ವಿವೇಕ ನೀಡು. ವಿಶೇಷ ದಿನಗಳಲ್ಲಿ ಬರುವ ಭಕ್ತರು ಪಡುವ ಕಷ್ಟಗಳನ್ನ ಅಧಿಕಾರಿಗಳು ನೋಡಿದರೆ ಅವರಿಗೆ ವಾಸ್ತವಾಂಶ ಅರಿವಾಗಲಿದೆ. ಹಾಗಾಗಿ ತುರ್ತಾಗಿ ವಸತಿ ಸಂಕೀರ್ಣ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲು ಅವರಿಗೆ ಬುದ್ದಿ ಕೊಡು ಎಂದು ಶ್ರೀಕಂಠೇಶ್ವರನಾದ ನಿಮ್ಮ ಬಳಿ ಪ್ರಾರ್ಥಿಸಿಕೊಳ್ಳುತ್ತೇನೆ..
ಇಂತಿ ಪರಮ ಭಕ್ತ ಎಂದು ಬರೆದಿದ್ದಾರೆ.
ನಂಜುಂಡೇಶ್ವರನ ಹುಂಡಿ ಹಣದಲ್ಲಿ ಪತ್ರದ ಮೂಲಕ ಮಾಡಿದ ಭಕ್ತರ ಮನವಿ ಅಧಿಕಾರಿಗಳು ಹಾಗೂ ರಾಜಕಾರಿಣಿಗಳ ಕಣ್ಣು ತೆರೆಸಲಿದೆಯೇ ಪತ್ರ ಬರೆದು ಹುಂಡಿಗೆ ಹಾಕಿರುವ ಉದ್ದೇಶ ಏನು..? ರಾಜಕೀಯ ಪಿತೂರಿಯ ಎಂಬುವುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು