8:00 AM Thursday16 - October 2025
ಬ್ರೇಕಿಂಗ್ ನ್ಯೂಸ್
ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಇತ್ತೀಚಿನ ಸುದ್ದಿ

ಸ್ವಾಮಿ ನಂಜುಂಡೇಶ್ವರ… ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ಕೊಡು: ಪರಮ ಭಕ್ತರಿಂದ ಪತ್ರಗಳ ಸುರಿಮಳೆ…!

07/08/2024, 20:04

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ದಕ್ಷಿಣಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ.
ನಿನ್ನ ನೋಡಲು ಬರುವ ಲಕ್ಷಾಂತರ ಭಕ್ತರಿಗೆ ದೇವಾಲಯದ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ನೀಡುವಂತೆ ಪತ್ರ ಬರೆದಿದ್ದಾರೆ. ಎಣಿಕೆ ವೇಳೆ ಅಧಿಕಾರಿಗಳಿಗೆ ಪತ್ರ ದೊರೆತಿದೆ.
ಒಂದು ಪತ್ರದಲ್ಲಿ ನನ್ನ ತಾತ, ನನ್ನ ತಂದೆ ನಾನು ಹಾಗೂ ನನ್ನ ಮಗ ಎಲ್ಲರೂ ನಿನ್ನ ಭಕ್ತರೇ. ಬಹಳ ದೂರದಿಂದ ನಿನ್ನ ಕಾಣಲು ಪ್ರತಿ ಹುಣ್ಣಿಮೆ ಹಾಗೂ ವಿಶೇಷ ದಿನಗಳಲ್ಲಿ ಬರುತ್ತೇವೆ.
ತಂದೆ ನಿನ್ನ ದರುಶನದಿಂದ ನಮ್ಮ ಕಷ್ಟಗಳೆಲ್ಲಾ ದೂರವಾಗಿದೆ ಒಡೆಯ. ಆದರೆ, ನಿನ್ನ ನೋಡಲು ಬರುವಾಗ ತುಂಬಾ ಕಷ್ಟವಾಗುವುದು. ರಾತ್ರಿ ಮಲಗುವುದಕ್ಕೆ ಚಿಕ್ಕ ಜಾಗವೂ ಇರುವುದಿಲ್ಲ. ಬೆಳಿಗ್ಗೆ ಸ್ನಾನಕ್ಕೆ ಕಪಿಲಾ ನದಿಗೆ ಹೋದರೆ ಎಲ್ಲಿ ನೋಡಿದರೂ ಕಸ ಕಸ ಕಸ. ಹೆಂಗೋ ಸ್ನಾನ ಮಾಡಿದರೆ ನನ್ನ ಮಡದಿಗೆ, ತಾಯಿಗೆ ಬಟ್ಟೆ ಬದಲಿಸಲೂ ಜಾಗವಿಲ್ಲ. ಉರುಳು ಸೇವೆ ಮಾಡಲು ವ್ಯವಸ್ಥೆ ಇಲ್ಲ. ಇನ್ನೂ ಅನೇಕ ತೊಂದರೆಗಳು ಈ ಬಗ್ಗೆ ಅಧಿಕಾರಿಗಳಿಗೆ, ರಾಜಕಾರಿಣಿಗಳಿಗೆ ಪತ್ರ ಬರೆದು ಸಾಕಾಗಿದೆ.
ಕೊನೆಯದಾಗಿ ನಿನಗೆ ನನ್ನ ಪತ್ರ ಬರೆದಿದ್ದೇನೆ. ನಿನ್ನ ಸನ್ನಿಧಿಗೆ ಬರುವ ನಮ್ಮಂತಹ ಲಕ್ಷಾಂತರ ಭಕ್ತರಿಗೆ ಈ ಕೆಟ್ಟ ವ್ಯವಸ್ಥೆಯಿಂದ ಪರಿಹಾರ ಕೊಡು ತಂದೆ.
ಇಂತಿ ನಿನ್ನ ಪರಮ‌ಭಕ್ತ ಎಂದು ಬರೆದಿದ್ದಾರೆ.
ಎರಡನೇ ಪತ್ರದಲ್ಲಿ, ಅಸಂಖ್ಯಾತ ಭಕ್ತರನ್ನು ಹೊಂದಿರುವ ನಿನಗೆ ಪ್ರತಿತಿಂಗಳು ಕೋಟ್ಯಂತರ ಹಣ ನಿನ್ನ ಮಡಿಲಿಗೆ ಹಾಕುತ್ತಿದ್ದಾರೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿಯಿಂದ ಮೂಲಭೂತ ಸೌಕರ್ಯ ದೊರೆಯುತ್ತಿಲ್ಲ ಎಂಬ ಯಾತನೆ ಹಾಗೂ ತಳಮಳ ತರುವ ವಿಷಯವಾಗಿದೆ. ಭಕ್ತರು ತಂಗಲು ವ್ಯವಸ್ಥೆ ಇಲ್ಲ ಎಂಬ ಕೊರಗು ಇದೆ. ಇನ್ನು ದೇವಾಲಯದ ಸಿಬ್ಬಂದಿಗಳು ಭಕ್ತರನ್ನ ನಿಕೃಷ್ಟವಾಗಿ ಕಾಣುತ್ತಿದ್ದಾರೆ ಅವರಿಗೆ ಒಳ್ಳೆಯ ಬುದ್ದಿ ಕೊಡು. ಭಕ್ತರಿಂದ ಸಂಗ್ರಹವಾಗುವ ದೇಣಿಗೆ ಹಣದಲ್ಲಿ ವಸತಿ ಸಂಕೀರ್ಣ ನಿರ್ಮಿಸುವುದಾಗಿ ಹೇಳಿದ್ರು. ಇದೀಗ ವಸತಿ ಸಂಕೀರ್ಣಕ್ಕೆ ಜಾಗವಿಲ್ಲ ಎಂದು ಹೇಳುತ್ತಿರುವ ಆಡಳಿತ ಮಂಡಳಿಗೆ ವಸತಿ ಸಂಕೀರ್ಣ ನಿರ್ಮಿಸಲು ಪ್ರೇರಣೆ ನೀಡು ಹಾಗೂ ವಿವೇಕ ನೀಡು. ವಿಶೇಷ ದಿನಗಳಲ್ಲಿ ಬರುವ ಭಕ್ತರು ಪಡುವ ಕಷ್ಟಗಳನ್ನ ಅಧಿಕಾರಿಗಳು ನೋಡಿದರೆ ಅವರಿಗೆ ವಾಸ್ತವಾಂಶ ಅರಿವಾಗಲಿದೆ. ಹಾಗಾಗಿ ತುರ್ತಾಗಿ ವಸತಿ ಸಂಕೀರ್ಣ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲು ಅವರಿಗೆ ಬುದ್ದಿ ಕೊಡು ಎಂದು ಶ್ರೀಕಂಠೇಶ್ವರನಾದ ನಿಮ್ಮ ಬಳಿ ಪ್ರಾರ್ಥಿಸಿಕೊಳ್ಳುತ್ತೇನೆ..
ಇಂತಿ ಪರಮ ಭಕ್ತ ಎಂದು ಬರೆದಿದ್ದಾರೆ.
ನಂಜುಂಡೇಶ್ವರನ ಹುಂಡಿ ಹಣದಲ್ಲಿ ಪತ್ರದ ಮೂಲಕ ಮಾಡಿದ ಭಕ್ತರ ಮನವಿ ಅಧಿಕಾರಿಗಳು ಹಾಗೂ ರಾಜಕಾರಿಣಿಗಳ ಕಣ್ಣು ತೆರೆಸಲಿದೆಯೇ ಪತ್ರ ಬರೆದು ಹುಂಡಿಗೆ ಹಾಕಿರುವ ಉದ್ದೇಶ ಏನು..? ರಾಜಕೀಯ ಪಿತೂರಿಯ ಎಂಬುವುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು