11:51 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ: ಸಂಚಾರಕ್ಕೆ ತೊಂದರೆ

08/08/2024, 19:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್, ಕೊಟ್ಟಿಗೆಹಾರ ಪಟ್ಟಣಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು,ಸವಾರರು, ವರ್ತಕರು ತೊಂದರೆ ಅನುಭವಿಸುವಂತಾಗಿದೆ. ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ 50ಕ್ಕೂ ಅಧಿಕ ಬಿಡಾಡಿ ದನಗಳು ಬಸ್ ನಿಲ್ದಾಣ, ರಸ್ತೆ, ಅಂಗಡಿಗಳ ಮುಂದೆ ಮುಂತಾದ ಕಡೆಗಳಲ್ಲಿ ಬೇಕಾಬಿಟ್ಟಿ ಓಡಾಡಿಕೊಂಡಿರುತ್ತವೆ. ಹಗಲು ವೇಳೆಯಲ್ಲಿ ರಸ್ತೆಯಲ್ಲಿ ಸಾಲುಗಟ್ಟಿ ಮಲಗುವ ಬಿಡಾಡಿ ದನಗಳು ರಾತ್ರಿಯಿದ್ದಂತೆ ಆಟೋ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮುಂದೆ ಸಗಣಿ, ಗಂಜಲವನ್ನು ಹಾಕಿ ಪರಿಸರ ಕಲುಷಿತಗೊಳಿಸುತ್ತವೆ. ವರ್ತಕರಿಗಂತೂ ಬೆಳಿಗ್ಗೆ ಅಂಗಡಿ ತೆರೆಯಲು ದನಗಳ ಗಂಜಲ, ಸಗಣಿ ಎತ್ತುವುದೇ ದಿನ ನಿತ್ಯದ ಕಾಯಕವಾಗಿದೆ. ಇಲ್ಲಿ ಮಲಗುವ ದನಗಳಿಗೆ ಮಾಲೀಕರಿದ್ದು ಕೂಡ ಅವುಗಳನ್ನೇ ಕಟ್ಟಿ ಹಾಕದೇ ಬಿಡುವುದರಿಂದ ಇವು ಬಿಡಾಡಿ ದನಗಳಂತೆ ಆಗಿವೆ. ದನಗಳನ್ನು ಮಾಲೀಕರು ಕಟ್ಟುವ ಬಗ್ಗೆ ಗ್ರಾಮ ಪಂಚಾಯಿತಿ, ಪೊಲೀಸರು ಹಲವು ಬಾರಿ ಸಭೆಗಳನ್ನು ನಡೆಸಿ ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗದೇ ದನಗಳ ಕಾಟ ತೀರಾ ಹೆಚ್ಚಾಗಿದೆ. ಇದಲ್ಲದೇ ವಾಹನ ಸಂಚರಿಸುವ ವೇಳೆ ದನಗಳು ಗುಂಪಾಗಿ ರಸ್ತೆಯಲ್ಲಿ ಮಲಗಿ ಅನೇಕ ಅಪಘಾತಗಳು ಸಂಭವಿಸುತ್ತಿವೆ. ವಾಹನಗಳು ಬರುವಾಗ ದನಗಳು ಆ ಕಡೆ ಓಡಾಡುವುದರಿಂದ ವಾಹನಗಳಿಗೆ ಅವು ತಾಗಿ ವಾಹನಕ್ಕೂ ಹಾನಿಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ದನಗಳ ಮಾಲೀಕರನ್ನು ಪತ್ತೆ ಸೂಕ್ತ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಿಡಾಡಿ ದನಗಳ ಕಿವಿಗಳಿಗೆ ಗುರುತು ಹಚ್ಚಲು ಪಶು ವೈದ್ಯ ಇಲಾಖೆಯವರು ಬಿಲ್ಲೆಗಳನ್ನು ಹಾಕಿದ್ದಾರೆ. ಅದರಲ್ಲಿ ಮಾಲೀಕರ ವಿವರ ಇರುತ್ತದೆ. ಇದರಿಂದ ಬಿಡಾಡಿ ದನಗಳ ಮಾಲೀಕರ ಗುರುತು ಪತ್ತೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು'.

—ಬಿ.ಸಿ. ಪ್ರವೀಣ್, ಮುಖಂಡರು, ಬಣಕಲ್.

ಇತ್ತೀಚಿನ ಸುದ್ದಿ

ಜಾಹೀರಾತು