7:03 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ: ಸಂಚಾರಕ್ಕೆ ತೊಂದರೆ

08/08/2024, 19:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್, ಕೊಟ್ಟಿಗೆಹಾರ ಪಟ್ಟಣಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು,ಸವಾರರು, ವರ್ತಕರು ತೊಂದರೆ ಅನುಭವಿಸುವಂತಾಗಿದೆ. ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ 50ಕ್ಕೂ ಅಧಿಕ ಬಿಡಾಡಿ ದನಗಳು ಬಸ್ ನಿಲ್ದಾಣ, ರಸ್ತೆ, ಅಂಗಡಿಗಳ ಮುಂದೆ ಮುಂತಾದ ಕಡೆಗಳಲ್ಲಿ ಬೇಕಾಬಿಟ್ಟಿ ಓಡಾಡಿಕೊಂಡಿರುತ್ತವೆ. ಹಗಲು ವೇಳೆಯಲ್ಲಿ ರಸ್ತೆಯಲ್ಲಿ ಸಾಲುಗಟ್ಟಿ ಮಲಗುವ ಬಿಡಾಡಿ ದನಗಳು ರಾತ್ರಿಯಿದ್ದಂತೆ ಆಟೋ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮುಂದೆ ಸಗಣಿ, ಗಂಜಲವನ್ನು ಹಾಕಿ ಪರಿಸರ ಕಲುಷಿತಗೊಳಿಸುತ್ತವೆ. ವರ್ತಕರಿಗಂತೂ ಬೆಳಿಗ್ಗೆ ಅಂಗಡಿ ತೆರೆಯಲು ದನಗಳ ಗಂಜಲ, ಸಗಣಿ ಎತ್ತುವುದೇ ದಿನ ನಿತ್ಯದ ಕಾಯಕವಾಗಿದೆ. ಇಲ್ಲಿ ಮಲಗುವ ದನಗಳಿಗೆ ಮಾಲೀಕರಿದ್ದು ಕೂಡ ಅವುಗಳನ್ನೇ ಕಟ್ಟಿ ಹಾಕದೇ ಬಿಡುವುದರಿಂದ ಇವು ಬಿಡಾಡಿ ದನಗಳಂತೆ ಆಗಿವೆ. ದನಗಳನ್ನು ಮಾಲೀಕರು ಕಟ್ಟುವ ಬಗ್ಗೆ ಗ್ರಾಮ ಪಂಚಾಯಿತಿ, ಪೊಲೀಸರು ಹಲವು ಬಾರಿ ಸಭೆಗಳನ್ನು ನಡೆಸಿ ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗದೇ ದನಗಳ ಕಾಟ ತೀರಾ ಹೆಚ್ಚಾಗಿದೆ. ಇದಲ್ಲದೇ ವಾಹನ ಸಂಚರಿಸುವ ವೇಳೆ ದನಗಳು ಗುಂಪಾಗಿ ರಸ್ತೆಯಲ್ಲಿ ಮಲಗಿ ಅನೇಕ ಅಪಘಾತಗಳು ಸಂಭವಿಸುತ್ತಿವೆ. ವಾಹನಗಳು ಬರುವಾಗ ದನಗಳು ಆ ಕಡೆ ಓಡಾಡುವುದರಿಂದ ವಾಹನಗಳಿಗೆ ಅವು ತಾಗಿ ವಾಹನಕ್ಕೂ ಹಾನಿಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ದನಗಳ ಮಾಲೀಕರನ್ನು ಪತ್ತೆ ಸೂಕ್ತ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಿಡಾಡಿ ದನಗಳ ಕಿವಿಗಳಿಗೆ ಗುರುತು ಹಚ್ಚಲು ಪಶು ವೈದ್ಯ ಇಲಾಖೆಯವರು ಬಿಲ್ಲೆಗಳನ್ನು ಹಾಕಿದ್ದಾರೆ. ಅದರಲ್ಲಿ ಮಾಲೀಕರ ವಿವರ ಇರುತ್ತದೆ. ಇದರಿಂದ ಬಿಡಾಡಿ ದನಗಳ ಮಾಲೀಕರ ಗುರುತು ಪತ್ತೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು'.

—ಬಿ.ಸಿ. ಪ್ರವೀಣ್, ಮುಖಂಡರು, ಬಣಕಲ್.

ಇತ್ತೀಚಿನ ಸುದ್ದಿ

ಜಾಹೀರಾತು