3:01 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್‌ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? 

25/08/2021, 19:16

ಬೆಂಗಳೂರು(reporterkarnataka.com);

ಕುಟುಂಬದ ಜತೆ ಮಾಲ್ಡೀವ್ಸ್‌ ನಿಂದ 5  ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ.

ಹೊಸ ಟೊಯೋಟಾ ವೆಲ್‌ಫೈರ್ ಕಾರನ್ನು ಮಾಜಿ ಸಿಎಂ ಆಗಿರುವ ಯಡಿಯೂರಪ್ಪ ಅವರು 2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಪ್ರವಾಸ ಮಾಡಲು ಬಳಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

78ರ ಹರೆಯದ ಬಿಜೆಪಿ ಹಿರಿಯ ನಾಯಕ ಮಾಲ್ಡೀವ್ಸ್‌ನಿಂದ ಹಿಂತಿರುಗಿದಾಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಚ್ಚ ಹೊಸ ಟೊಯೋಟಾ ವೆಲ್‌ಫೈರ್ ಕಾರು ಅವರನ್ನು ಮನೆಗೆ ಕರೆದುಕೊಂಡು ಹೋಗಲು ಕಾಯುತ್ತಿತ್ತು.
ಯಡಿಯೂರಪ್ಪ ಅವರು ಜುಲೈ 26 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ, ಅವರು ರಾಜ್ಯದಾದ್ಯಂತ ತಮ್ಮ ಪ್ರವಾಸಕ್ಕೆ ಕಾರನ್ನು ಬಳಸುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು