10:47 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ

09/08/2024, 11:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.


ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು