2:06 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ

09/08/2024, 11:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.


ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು