1:17 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ

09/08/2024, 18:57

ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ನಂಜಪ್ಪ ಬಡಾವಣೆಯ ಮನೆಗೆ ಇಂದು ಮಹಾ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿತು ಮುತ್ತಿಗೆಗೆ ಮುನ್ನವೇ ರಸ್ತೆಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಫೋಟೋ ಪ್ರದರ್ಶಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ಪ್ರತಿಭಟನಾಕಾರರು ಮೊದಲ ಬ್ಯಾರಿಕೇಡ್​ ಅನ್ನು ನೂಕಿ ಮುಂದೆ ಸಾಗಿದರು. ಎರಡನೇ ಬ್ಯಾರಿಕೇಡ್​ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ ಬ್ಯಾರಿಕೇಡ್​ ಮೇಲೆ ಹತ್ತಿ ಒಳ ನುಗ್ಗಲು ಯತ್ನಿಸಿದರು‌. ಈ ವೇಳೆ ಪೊಲೀಸರು ಎಲ್ಲಾ ಪ್ರತಿಭಟನಗಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು.
ಒಕ್ಕೂಟದ ಸಂಚಾಲಕ ಕೆ.ರಂಗನಾಥ್ ಅವರು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ಇದರಿಂದ ನಾವು ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದೇವೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌.ಎಂ.ಶರತ್ ಪಾಲಕ್ಷ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು