3:48 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು